Home » ವಿಶ್ವವಿನಾಯಕ ಪಿಯು ಕಾಲೇಜು ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆ
 

ವಿಶ್ವವಿನಾಯಕ ಪಿಯು ಕಾಲೇಜು ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆ

by Kundapur Xpress
Spread the love

ತೆಕ್ಕಟ್ಟೆ : ವಿಶ್ವವಿನಾಯಕ ಪಿಯು ಕಾಲೇಜು ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ ಪ್ರಭಾಕರ್ ಶೆಟ್ಟಿಯವರು ವಿದ್ಯಾರ್ಥಿಗಳು ಪದವಿ ಪೂರ್ವ ನಂತರ ಸಿಎ ಕೋರ್ಸ್ ಮಾಡುವುದರ ಬಗ್ಗೆ ಮತ್ತು ಆ ಕೋರ್ಸಿಗಿರುವ ಉದ್ದೇಶದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾದ ಸಿ.ಎ. ಸಂತೋಷ್ ಪ್ರಭು ಅವರು ಸಿ.ಎ, ಸಿ.ಎಸ್, ಸಿ.ಎಂ. ಎ ಕೋರ್ಸ್ ನ ಬಗ್ಗೆ, ಅದರಲ್ಲಿರುವ ವಿಷಯಗಳ ಕುರಿತು ತರಬೇತಿ ಹಾಗೂ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿತಿಕ ಗಾಣಿಗ ಸ್ವಾಗತಿಸಿದರು, ಸಾಕೆತ್ ವಂದಿಸಿದರು, ಪ್ರಾರ್ಥನಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!