79
ಕೋಟ: ಸದಾ ಸಾಂಸ್ಕೃತಿಕ, ಶೈಕ್ಷಣಿಕ, ವಿನೋದ, ಶುಭ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹಿಸುವ ಸಿಂಗಾಪುರ ಕನ್ನಡ ಸಂಘದ ಆಹ್ವಾನದ ಮೇರೆಗೆ ಆ.೩೦ರಂದು ಅನುಭವಿ ಕಲಾವಿದರಿಂದ ಹಿಡಿದು ಉದಯೋನ್ಮುಕ ಕಲಾವಿದರನ್ನು ಒಳಗೊಂಡ ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ಯಕ್ಷದೇಗುಲ ತಂಡದವರಿAದ ಸಿಂಗಾಪುರದ ಖಇಐಅ ಇಂಟರ್ನ್ಯಾಷನಲ್ ಹೋಟೆಲ್ನ ಸಭಾಂಗಣದಲ್ಲಿ ರತ್ನಾವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನೀಡಿತು.
ಈ ಪ್ರದರ್ಶನವು ೪೦೦ಕ್ಕೂ ಹೆಚ್ಚು ಕನ್ನಡಿಗರ ಉತ್ಸಾಹ ಭರಿತ ಪ್ರೇಕ್ಷಕರನ್ನು ಸೆಳೆಯಿತು. ಇದೇ ಸಂದರ್ಭದಲ್ಲಿ ರತ್ನಾವತಿ ಕಲ್ಯಾಣ ಪ್ರಸಂಗದಲ್ಲಿ ಯಕ್ಷದೇಗುಲವು ಸಿಂಗಾಪುರದಲ್ಲಿ ಹುಟ್ಟಿ, ಬೆಳೆದ ೧೦ ಮಕ್ಕಳಿಗೆ ತಂಡದ ಉಸ್ತುವಾರಿ ಹೊತ್ತ ಗುರು ಪ್ರಿಯಾಂಕ ಕೆ. ಮೋಹನ್ರು ಯಕ್ಷಗಾನ ತರಬೇತಿ ನೀಡಿ ತಂಡದ ಕಾರ್ಯಕ್ರಮದಲ್ಲಿ ಸೇರಿಸಿಕೊಂಡರು.
ಇದು ಅಲ್ಲಿನ ಮಕ್ಕಳಿಗೆ ವಿಶಿಷ್ಟ ಸಾಂಸ್ಕೃತಿಕ ಅನುಭವದೊಂದಿಗೆ ಹಿರಿಯ ಕಲಾವಿದರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಅವಕಾಶ ನೀಡಿತು. ಇದರಿಂದ ಸಮೂದಾಯದಿಂದ ಆತ್ಮೀಯ ಮೆಚ್ಚುಗೆಯನ್ನು ಪಡೆದದಲ್ಲದೆ, ಪ್ರೇಕ್ಷಕರು ಈ ಪ್ರದರ್ಶನವು ಅವರ ಸಾಂಸ್ಕೃತಿಕ ಸಂಪರ್ಕ ಮತ್ತು ಹೆಮ್ಮೆಯನ್ನು ಹೆಚ್ಚಿಸಿತು. ಕಲಾವಿದರಾಗಿ ಸುದರ್ಶನ ಉರಾಳ, ಪ್ರಿಯಾಂಕ ಕೆ. ಮೋಹನ್, ಸುಜಯೀಂದ್ರ ಹಂದೆ, ಲಂಬೋದರ ಹೆಗಡೆ, ಕಡಬಾಳ ಉದಯ ಹೆಗಡೆ, ವಿಶ್ವನಾಥ ಉರಾಳ, ಸುದೀಪ ಉರಾಳ, ದಿನೇಶ್ ಕನ್ನಾರು, ಶ್ರೀರಾಮ ಹೆಬ್ಬಾರ್, ಶ್ರೀವತ್ಸ, ಶ್ರೀವಿದ್ಯಾ ರವರು ಭಾಗವಹಿಸಿದರು. ಕಾರ್ಯಕ್ರಮದ ಮೊದಲು ಕನ್ನಡ ಸಂಘದ ಅಧ್ಯಕ್ಷರಾದ ವೆಂಕಟೇಶ್, ಕಾರ್ಯದರ್ಶಿ ಕಿಶೋರ್ ಹಾಗೂ ನಮ್ಮ ಆತ್ಮೀಯ ಹಿಂದಿನ ಯಕ್ಷದೇಗುಲದ ಕಲಾವಿದರಾದ ವೈಕುಂಠ ನಕ್ಷತ್ರಿ ದಂಪತಿಯನ್ನು ಯಕ್ಷದೇಗುಲದಿಂದ ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಿಂಗಾಪುರದ ಕನ್ನಡ ಸಂಘದಿAದ ಭಾಗವಹಿಸಿದ ಕಲಾವಿದರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

