Home » ಅಕ್ರಮ ಗೋ-ಸಾಗಾಟ : ಮೂವರ ಬಂಧನ
 

ಅಕ್ರಮ ಗೋ-ಸಾಗಾಟ : ಮೂವರ ಬಂಧನ

by Kundapur Xpress
Spread the love

ಕುಂದಾಪುರ : ಸಿದ್ದಾಪುರದ ಐರಬೈಲು ಎಂಬಲ್ಲಿ  ಅಕ್ರಮ ಗೋವುಗಳ ಸಾಗಾಟ ಪತ್ತೆ ಹಚ್ಚಿದ ಶಂಕರನಾರಾಯಣ ಪೊಲೀಸರು ವಾಹನ ಸಹಿತ ಗೋವುಗಳನ್ನು  ಸ್ವಾಧೀನ ಪಡಿಸಿಕೊಂಡಿದ್ದಾರೆ.

ಶಂಕರ ನಾರಾಯಣ ಠಾಣಾಧಿಕಾರಿ ನಾಸೀರ್‌ ಹುಸೇನ್‌ ಹಾಗೂ ಸಿಬ್ಬಂದಿಗಳು ನಡೆಸಿದ ಕಾರ್ಯಾಅಚರಣೆಯಲ್ಲಿ
ಮಹಾರಾಷ್ಟ್ರದಲ್ಲಿ ಗೋವು ಕಳವು ಮಾಡಿ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ 3 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿ ಗಳಾದ ಮುಸ್ತಾಕ್ ಹುಸೇನ್ ಸಾಬ್ ನದಾಫ್, ಇರ್ಫಾನ್ ಇಬ್ರಾಹಿಂ ಸಾಬ್ ಜಮಾದಾರ್, ಮಹಮ್ಮದ್ ಆದಿಲ್ ಭಟ್ಕಳ ಎಂಬವರನ್ನು ಬಂಧಿಸಲಾಗಿದ್ದು 3 ಲಕ್ಷ ರೂ. ಮೌಲ್ಯದ ವಾಹನ, 45 ಸಾವಿರ ಮೌಲ್ಯದ ಗೋವುಗಳು, 2 ಮೊಬೈಲ್ ವಶಪಡಿಸಿಕೊಳ್ಳಲಾಗಿದ್ದು ಶಂಕರ ನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!