Home » ಬಸ್ರೂರು ಬಳಿ ಭೀಕರ ಅಪಘಾತ : ಇಬ್ಬರು ಮೃತ್ಯು
 

ಬಸ್ರೂರು ಬಳಿ ಭೀಕರ ಅಪಘಾತ : ಇಬ್ಬರು ಮೃತ್ಯು

ಸ್ಕೂಟರ್ ಹಾಗೂ ಕಾರು

by Kundapur Xpress
Spread the love

ಕುಂದಾಪುರ  ಸ್ಕೂಟರ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ಸಂಭವಿಸಿದೆ.

ಮೃತಪಟ್ಟ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ (50 ವರ್ಷ) ಹಾಗೂ ಸುಧೀರ್ ದೇವಾಡಿಗ (35 ವರ್ಷ) ಎಂದು ತಿಳಿದು ಬಂದಿದೆ

ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಮಾರುತಿ ಸಿಫ್ಟ್ ಕಾರೊಂದು ಬಸ್ರೂರಿನಿಂದ ಕಂಡ್ಲೂರು ಕಡೆಗೆ ಹೋಗುತ್ತಿದ ಸ್ಕೂಟರ್ ಗೆ ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ನುಜ್ಜು ಗುಜ್ಜಾಗಿದ್ದು ಸ್ಕೂಟರ್ ಸವಾರರು ಗಂಭೀರ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಕಾರು ಚಾಲಕ ಪರಾರಿಯಾಗಿದ್ದು ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!