Home » ಆನಗಳ್ಳಿ ಹೊಳೆಯಲ್ಲಿ ಮೃತದೇಹ ಪತ್ತೆ
 

ಆನಗಳ್ಳಿ ಹೊಳೆಯಲ್ಲಿ ಮೃತದೇಹ ಪತ್ತೆ

by Kundapur Xpress
Spread the love

ಕುಂದಾಪುರ : ಕುಂದಾಪುರ ನಗರ ಸಮೀಪದ ಆನಗಳ್ಳಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ  ತ್ರಾಸಿಯ ನಿವಾಸಿಯಾದ ಸಂದೀಪ್‌ ಪೂಜಾರಿ ಎಂಬವರು ಕಳೆದ ಎರಡು ದಿನಗಳಿಂದ ನಾಪತ್ತೆಯಾದ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಅವರ ಸಹೋದರ ಸಂತೋಷ ಪೂಜಾರಿ ದೂರು ನೀಡಿದ್ದರು

ದಿನಾಂಕ 07.03.2025 ರಂದು ಮಧ್ಯಾಹ್ನ 12.00 ಗಂಟೆಯ ವೇಳೆಗೆ ಮನೆಯಿಂದ ಬಲೆಯನ್ನು ಹಿಡಿದುಕೊಂಡು ಏಂದಿನಂತೆ ಆರಾಟೆ ಬಳಿಯ ಮೂವತ್ತುಮುಡಿ ಸೇತುವೆ ಬಳಿಯ ನದಿಯಲ್ಲಿ ಮೀನು ಹಿಡಿಯಲು ಸಂದೀಪ್‌ ತೆರಳಿದ್ದು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದರು

ಇಂದು ಅವರ ಮೃತದೇಹ ಆನಗಳ್ಳಿ ನದಿಯಲ್ಲಿ ಪತ್ತೆಯಾಗಿದ್ದು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!