118
ಕುಂದಾಪುರ : ಬಾವಿ ತೋಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಯ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೋಟೇಶ್ವರ ಬಳಿಯ ಗೋಪಾಡಿ ಗ್ರಾಮದ ಮೂಡುಗೋಪಾಡಿ ಎಂಬಲ್ಲಿ ನಡೆದಿದೆ. ಬಳ್ಳೂರು ಗ್ರಾಮದ ಸುಭಾಶ್ (50) ಮೃತಪಟ್ಟವರು.
ಸುಭಾಶ್ ಅವರು ಮಗನಾದ ಸುರೇಂದ್ರ ಅವರ ಜೊತೆ ಬಾವಿ ಕೆಲಸಕ್ಕೆ ಹೋಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಗೋಪಾಡಿ ಗ್ರಾಮದ ಮೂಡುಗೋಪಾಡಿ ಕರುಣಾಕರ ಎಂಬುವರ ಜಾಗದಲ್ಲಿ ಬಾವಿ ತೋಡುವ ಕೆಲಸ ಮಾಡುತ್ತಿದ್ದರು. ಬಾವಿಯ ರಿಂಗ್ ಬಡಿಯಲ್ಲಿ ಜಲ್ಲಿ ಕಲ್ಲುಗಳನ್ನು ಹಾಕಲು ಅಳವಡಿಸಿದ ಪಿವಿಸಿ ಪೈಪ್ ಬಾವಿಗೆ ಬಿದ್ದಿದ್ದನ್ನು ತೆಗೆಯಲು ಬಾವಿಗೆ ಇಳಿದಿದ್ದ ಸುಭಾಶ್ ಅವರು ಬಾವಿಯಿಂದ ಮೇಲೆ ಬರಲು ಹಗ್ಗದ ಸಹಾಯದಿಂದ ಹತ್ತುತ್ತಿರುವಾಗ ಆಕಸ್ಮಿಕವಾಗಿ ಹಗ್ಗವು ಕೈಯಿಂದ ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

