101
ಶ್ರೀರಂಗಪಟ್ಟಣ : ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಸಂಜೆ ಅಪಘಾತಕ್ಕೀಡಾಗಿ 4 ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾಗ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಮಳೆ ಬರುತ್ತಿದ್ದ ಕಾರಣ
ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಎಎಸ್ಐ ಮಹೇಶ್, ಸಿಬ್ಬಂದಿ ದಿನೇಶ್, ಜಯಲಿಂಗ ಹಾಗೂ ಕಾರ್ತಿಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

