134
ಕುಂದಾಪುರ : ಕುಂದಾಪುರ ನಗರದ ಮದ್ದುಗುಡ್ಡೆ ನಿವಾಸಿ ನಾಗೇಶ ಮೇಸ್ತ (43) ಎಂಬುವರು ವಿಪರೀತ ಮದ್ಯ ಸೇವನೆಯಿಂದಾಗಿ ಸರಿಯಾಗಿ ಊಟ ತಿಂಡಿ ಸೇವಿಸದೇ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.
ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ ನಾಗೇಶ್ ಕಳೆದ 3-4 ದಿನಗಳಿಂದ ವಿಪರೀತ ಮದ್ಯಪಾನ ಮಾಡಿ ಮನೆಯಲ್ಲಿಯೇ ಇದ್ದರು. ಭಾನುವಾರ ಮನೆಯಲ್ಲಿ ಮಲಗಿದಲ್ಲಿಯೇ ಅಸ್ವಸ್ಥಗೊಂಡಿದ್ದ ಇವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ನಾಗೇಶ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

