219
ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ರೈಲ್ವೇ ಬ್ರಿಡ್ಜ್ ಬಳಿ ಅಪರಿಚಿತ ಯುವಕ ಮತ್ತ್ವಗಂಧ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಬಾರ್ಕೂರು ರೈಲ್ವೆ ಗ್ಯಾಂಗ್ಮ್ಯಾನ್ ಮಟಪಾಡಿ ಗ್ರಾಮದ ಪ್ರಶಾಂತ್ ಎಂಬವರಿಗೆ ಚಾಂತಾರು ಗ್ರಾಮದ ಹಾಲಿನ ಡೈರಿ ಸಮೀಪದ ರೈಲ್ವೆ ಹಳಿಯಲ್ಲಿ ಮತ್ತ್ವಗಂಧ ಎಕ್ಸ್ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬರು ಸಿಲುಕಿರುವ ಮಾಹಿತಿ ಲಭಿಸಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಸುಮಾರು 25 ರಿಂದ 35 ವರ್ಷ ವಯಸ್ಸಿನ ಅಪರಿಚಿತ ಯುವಕನ ಮೃತದೇಹ ಛಿದ್ರವಾಗಿ ಬಿದ್ದಿರುವುದು ಕಂಡು ಬಂದಿದೆ.
ಈ ಬಗ್ಗೆ ಪ್ರಶಾಂತ್ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

