Home » ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
 

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

by Kundapur Xpress
Spread the love

ಉಡುಪಿ : ಬಿಬಿಎ ಮೊದಲ ವರ್ಷದ ಎರಡನೇ ಸೆಮಿಸ್ಟನರ್‌ ನಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಮನ ನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಛತ್ತೀಸ್‌ಗರ್ ನಿವಾಸಿ ಅನ್ಯುಲ್ ಯಾದವ್ (21) ನೇಣಿಗೆ ಶರಣಾದ ವಿದ್ಯಾರ್ಥಿ, ಇವರು ಮಣಿಪಾಲ ಸ್ಕೂಲ್ ಆಫ್ ಕಾಮರ್ಸ್ ಆ್ಯಂಡ್ ಇಕನಾಮಿಕ್ಸ್ ಅಕಾಡೆಮಿಯಲ್ಲಿ 2023-24 ನೇ ಸಾಲಿನ ಬಿಬಿಎ (ಬ್ಯಾಚುಲರ್ ಆಫ್ ಬಿಸಿನೆಸ್ ಅಕಾಡೆಮಿ) ವ್ಯಾಸಂಗ ಮಾಡುತ್ತಿದ್ದು, ಮಣಿಪಾಲದ ಎಂಐಟಿ ಹಾಸ್ಟೆಲ್‌ನಲ್ಲಿ ವಾಸವಿದ್ದರು.

 

Related Articles

error: Content is protected !!