208
ಕೋಟ : ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತಾಡಿ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ
ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕರಿಮಣಿ ಕಸಿದು ಪರಾರಿಯಾಗಿದ್ದು ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಆರೋಪಿ, ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯನನ್ನು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ
ಪೊಲೀಸರು ತನಿಖೆ ಮುಂದುವರಿಸಿದ್ದು ಈ ಹಿಂದೆಯೂ ತಾನು ಇದೇ ರೀತಿಯ ಕೃತ್ಯವನ್ನು ಎಸಗಿರುವುದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ

