Home » ಸೊಸೈಟಿ ಕಳ್ಳತನ : ನಟೋರಿಯಸ್ ಆರೋಪಿ ಬಂಧನ
 

ಸೊಸೈಟಿ ಕಳ್ಳತನ : ನಟೋರಿಯಸ್ ಆರೋಪಿ ಬಂಧನ

ಭಟ್ಕಳದ ರಂಗೀನಕಟ್ಟಾ ಶ್ರೀ ವಿನಾಯಕ ಸೌಹಾರ್ದ ಕ್ರಡೀಟ್ ಕೊ-ಆಪರೇಟಿವ್ ಸೊಸೈಟಿ

by Kundapur Xpress
Spread the love

ಭಟ್ಕಳ : ಸೊಸೈಟಿ ಕಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ ಭಟ್ಕಳ ನಗರ ಠಾಣಾ ಪೊಲೀಸರು ಮೊಹಮ್ಮದ ರಾಯಿಕ್ ಎಂಬಾತನ್ನು ಬಂಧಿಸಿ ಅತನಿಂದ 40,000 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ

ಭಟ್ಕಳದ ರಂಗೀನಕಟ್ಟಾ ಶ್ರೀ ವಿನಾಯಕ ಸೌಹಾರ್ದ ಕ್ರಡೀಟ್ ಕೊ-ಆಪರೇಟಿವ್ ಸೊಸೈಟಿಯಲ್ಲಿ ಯಾರೋ ಕಳ್ಳರು ದಿನಾಂಕ 16/04/2024 ರಂದು ಸಾಯಂಕಾಲ 5-30 ಗಂಟೆಯಿಂದ ದಿನಾಂಕ 17/04/2024 ಬೆಳಿಗ್ಗೆ 9-30 ಗಂಟೆಯ ನಡುವಿನ ಅವಧಿಯಲ್ಲಿ ಒಟ್ಟು ನಗದು ಹಣ 1,70,968/- ರೂಪಾಯಿಗಳನ್ನು ಲಾಕರ್ ಸಮೇತ ಎತ್ತಿಕೊಂಡು ಹೋಗಿ ಕಳುವು ಮಾಡಿದ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಭಟ್ಕಳ ವೃತ್ತ ನಿರೀಕ್ಷಕರಾ ಶ್ರೀ ಸಂತೋಷ ಕಾಯ್ಕಿಣಿ ನೇತೃತ್ವದ ತಂಡ ಪ್ರಕರಣದ ಆರೋಪಿ ಆರೋಪಿಯಾದ ಭಟ್ಕಳದ ಕಿದ್ವಾಯಿ ಮೇನ್ ರೋಡ್ 2 ನೇ ಕ್ರಾಸ್ ಹತ್ತಿರದ‌ ನಿವಾಸಿಯಾದ ಮೊಹಮ್ಮದ ಗೌಸ ಈತನ ಪುತ್ರನಾದ ಮೊಹಮ್ಮದ ರಾಯಿಕ್ ನನ್ನು ಬಂಧಿಸಿದ್ದಾರೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆತನಿಗೆ  ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಆರೋಪಿಯ ಮೇಲೆ ಈಗಾಗಲೇ ಜಿಲ್ಲೆ ಮತ್ತು ಹೊರ ಜಿಲ್ಲೆಯ ವಿವಿಧ ಪೊಲೀಸ ಠಾಣೆಗಳಲ್ಲಿ ಒಟ್ಟು 16 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ

 

Related Articles

error: Content is protected !!