Home » ಬಿ. ಬಿ. ಹೆಗ್ಡೆ ಕಾಲೇಜು: ತ್ರಾಸಿಯಲ್ಲಿ ಮುಂಗಾರುಪೂರ್ವ ಸ್ವಚ್ಛತಾ ಕಾರ್ಯಕ್ರಮ
 

ಬಿ. ಬಿ. ಹೆಗ್ಡೆ ಕಾಲೇಜು: ತ್ರಾಸಿಯಲ್ಲಿ ಮುಂಗಾರುಪೂರ್ವ ಸ್ವಚ್ಛತಾ ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್, ತ್ರಾಸಿ ಇವರ ಸಹಯೋಗದೊಂದಿಗೆ ಮುಂಗಾರುಪೂರ್ವ ಸ್ವಚ್ಛತಾ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ಪರಿಸರದಲ್ಲಿ ಮೇ 15ರಂದು ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶ್ರೀ ಸತ್ಯನಾರಾಯಣ. ಜಿ., ತಾಲೂಕು ಪಂಚಾಯತ್ ಕುಂದಾಪುರ ಇಲ್ಲಿನ ವ್ಯವಸ್ಥಾಪಕ ಶ್ರೀ ರಾಮಚಂದ್ರ ಮಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾ ಬಿಲ್ಲವ, ಲೆಕ್ಕ ಸಹಾಯಕರು ಮತ್ತು ಸಿಬ್ಬಂದಿ ವರ್ಗ, ಭ್ರಾಮರಿ ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ, ಪೂಜಾ ಕುಂದರ್ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕರು ಉಪಸ್ಥಿತರಿದ್ದರು.

 

Related Articles

error: Content is protected !!