86
ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2 ಹಾಗೂ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಮಿಡ್ ಟೌನ್, ಲಯನ್ಸ್ ಕ್ಲಬ್ ಕೋಸ್ಟಲ್ ಹಾಗೂ ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಗರದ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.
ಕುಂದಾಪುರದ ಉತ್ತಮ್ ಹೋಮಿಯೋ ಕ್ಲಿನಿಕ್ನ ವೈದ್ಯಾಧಿಕಾರಿ ಡಾ. ಉತ್ತಮ್ ಕುಮಾರ್ ಶೆಟ್ಟಿ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಶಿಬಿರದ ಸಂಚಾಲಕ ಪ್ರಶಾಂತ್ ಶೆಟ್ಟಿ ಶಿರೂರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಶಿಕ್ಷಕ ರಾಜೀವ ಶೆಟ್ಟಿ ನಿಡೂಟಿ ಕಾರ್ಯಕ್ರಮ ನಿರೂಪಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ವಂದಿಸಿದರು.

