Home » ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ
 

ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

by Kundapur Xpress
Spread the love

ಹೆಮ್ಮಾಡಿ: ಕ್ರೀಡೆ ಸಮಾಜದಲ್ಲಿ ಸಾಮರಸ್ಯ ಮೂಡಿಸಿ ನಾವೆಲ್ಲಾ ಒಂದೆ ಎಂಬ ಭಾವನೆ ಮೂಡಿಸುತ್ತದೆ ಎಂದು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಹೇಳಿದರು.
ಅವರು ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿ ನಮ್ಮಲ್ಲಿರುವ ನ್ಯೂನತೆ ಮರೆದು ಗುರಿ ಕಡೆಗೆ ಗಮನ ಕೊಟ್ಟಾಗ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದು ಎಂದರು.
ವೇದಿಕೆಯಲ್ಲಿ ಜನತಾ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ,
ಕಟ್ ಬೆಲ್ತೂರಿನ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್, ಕರಾಟೆ ಶಿಕ್ಷರಾದ ಅಕ್ಷಯ್,ಹಾಗೂ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತವಿಕ ಮಾತಾಗಳನ್ನಾಡಿದಾರು, ಉಪನ್ಯಾಸಕರಾದ ಉದಯ ನಾಯ್ಕ ನಿರೂಪಿಸಿದರು

 

Related Articles

error: Content is protected !!