Home » ಎನ್ ಎಂ ಎಂ ಎಸ್ ಪರೀಕ್ಷಾ ತರಬೇತಿ ಕಾರ್ಯಗಾರ
 

ಎನ್ ಎಂ ಎಂ ಎಸ್ ಪರೀಕ್ಷಾ ತರಬೇತಿ ಕಾರ್ಯಗಾರ

by Kundapur Xpress
Spread the love

ಕೋಟೇಶ್ವರ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಎನ್ ಎಂ ಎಂ ಎಸ್ ಪರೀಕ್ಷಾ ತರಬೇತಿ ಕಾರ್ಯಗಾರ ಶಾಲಾ ಚೇತನ ಸಭಾಭವನದಲ್ಲಿ ನಡೆಯಿತು

ಕುಂದಾಪುರ ತಾಲೂಕಿನ ವಿವಿಧ ಪ್ರೌಢಶಾಲೆಗಳ 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಎಸ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಶ್ಯವಿರುವ ಜ್ಞಾನವನ್ನು ಪಡೆಯಲು ಪೂರಕವಾದ ಈ ಪರೀಕ್ಷೆ ವಿವಿಧ ವಿಷಯಗಳ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದರ ಮೂಲಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದಿನ ಶಿಕ್ಷಣದ ಯಶಸ್ಸಿಗೆ ದಾರಿ ದೀಪ ವಾಗಲಿದೆ ಎಂದರು
ಸಂಪನ್ಮೂಲ ವ್ಯಕ್ತಿಗಳಾಗಿ ಉದಯ್ ಕುಮಾರ್ ಶೆಟ್ಟಿ ಹೆಸ್ಕುತ್ತೂರು ಅಜಯ್ ಕುಮಾರ್ ಶೆಟ್ಟಿ ಕಂಡ್ಲೂರು ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು

ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಕೆಪಿಎಸ್ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು ಶಿಕ್ಷಣ ಸಂಯೋಜಕ ನಾರಾಯಣ ಮರಾಠಿ ಕಾರ್ಯಾಗಾರದ ಸಂಪೂರ್ಣ ಉಸ್ತುವಾರಿ ವಹಿಸಿದ್ದರು .

 

Related Articles

error: Content is protected !!