Home » ಎಂ ಸಿ ಎನ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ
 

ಎಂ ಸಿ ಎನ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ

by Kundapur Xpress
Spread the love

ಮೂಡ್ಲಕಟ್ಟೆ : ನರ್ಸಿಂಗ್ ಕಾಲೇಜಿನ 6 ನೇ ಬ್ಯಾಚ್‌ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲಾರಾದ ಡಾ. ಅನಿತಾ ಸಿ. ರಾವ್, ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್; ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್; ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ರೂಪಶ್ರೀ ಕೆ. ಎಸ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಆಧುನಿಕ ನರ್ಸಿಂಗ್‌ಗೆ ಫ್ಲಾರೆನ್ಸ್ ನೈಟಿಂಗೇಲ್ ನೀಡಿದ ಗಮನಾರ್ಹ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣವಚನ ಸ್ವೀಕಾರ ಸಮಾರಂಭವು ಕಾರ್ಯಕ್ರಮದ ಅತ್ಯಂತ ಮಹತ್ವದ ಭಾಗವಾಗಿತ್ತು. ನರ್ಸಿಂಗ್ ವೃತ್ತಿಯ ನೈತಿಕ ಮಾನದಂಡಗಳು, ಮೌಲ್ಯಗಳು ಮತ್ತು ಜವಾಬ್ದಾರಿಗಳನ್ನು ಎತ್ತಿಹಿಡಿಯಲು ವಿದ್ಯಾರ್ಥಿಗಳಿಗೆ ಪ್ರಮಾಣವಚನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಬೋಧಿಸಿದರು.

ಮುಖ್ಯ ಅತಿಥಿ, ಡಾ. ಅನಿತಾ ಸಿ. ರಾವ್ ಅವರು ಸ್ಪೂರ್ತಿದಾಯಕ ಭಾಷಣ ಮಾಡಿ ಕಾರ್ಯಕ್ರಮದ ಪ್ರಾಮುಖ್ಯತೆ ತಿಳಿಸಿದರು.

ಡಾ.ಎಸ್.ಎನ್. ಭಟ್ ಅವರು ಅಧ್ಯಕ್ಷೀಯ ಭಾಷಣ ಮಾಡಿ ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳಿಗೆ ಬದ್ಧರಾಗಿರಲು ಮತ್ತು ನರ್ಸಿಂಗ್ ವೃತ್ತಿಯ ಘನತೆಯನ್ನು ಎತ್ತಿಹಿಡಿಯಲು ತಿಳಿಸಿದರು ಹಾಗೂ ಅತ್ಯುತ್ತಮವಾಗಿ ಕಾರ್ಯಕ್ರಮ ಸಂಯೋಜಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಚೇತನಾರವರು ಸ್ವಾಗತಿಸಿದರು. ಪೀಡಿಯಾಟ್ರಿಕ್ ವಿಭಾಗ ಮುಖ್ಯಸ್ಥ ಚಂದ್ರಶೇಖರ್ ವಂದಿಸಿದರು. ಪವಿತ್ರಾ ರವರು ನಿರೂಪಿಸಿದರು. ಸಮಾರಂಭವು ರಾಷ್ಟ್ರಗೀತೆಯೊಂದಿಗೆ ಕೊನೆಗೊಂಡಿತು.

 

Related Articles

error: Content is protected !!