Home » ಅಹಮದಾಬಾದ್​ ವಿಮಾನ ದುರಂತ : ಅಚ್ಚರಿಯ ಅಂಶ ಬಯಲು
 

ಅಹಮದಾಬಾದ್​ ವಿಮಾನ ದುರಂತ : ಅಚ್ಚರಿಯ ಅಂಶ ಬಯಲು

ಇಂಜಿನ್​ಗೆ ಇಂಧನ ಪೂರೈಕೆ ಕಡಿತ

by Kundapur Xpress
Spread the love

ನವದೆಹಲಿ : 270ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದ್ದ ಅಹಮದಾಬಾದ್​ ವಿಮಾನ ದುರಂತದ ಕಾರಣ ಬಯಲಾಗಿದ್ದು ಅಪಘಾತದ ಬಗ್ಗೆ ತನಿಖೆ ನಡೆಸಿದ್ದ ವಿಮಾನ ಅಪಘಾತಗಳ ತನಿಖಾ ಸಂಸ್ಥೆಯು (AAIB) ಬಿಡುಗಡೆಗೊಳಿಸಿದ ವರದಿಯಲ್ಲಿ ಅಚ್ಚರಿಯ ಅಂಶ ಬಯಲಾಗಿದ್ದು ಇಂಜಿನ್​ಗೆ ಇಂಧನ ಪೂರೈಕೆ ಕಡಿತದಿಂದಾಗಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ

ವಿಮಾನ ಹಾರಿದ ಕೆಲವೇ ಸೆಕೆಂಡುಗಳಲ್ಲಿ ಎರಡು ಇಂಜಿನ್​ಗಳಿಗೆ ಇಂಧನ ಪೂರೈಕೆ ನಿಂತಿದೆ. ಅದರ ಸ್ವಿಚ್​​ಗಳು RUN ನಿಂದ CUT OFF ಆಗಿದ್ದವು. ಇದರಿಂದ ಇಂಧನ ಸರಬರಾಜಾಗದೆ ವಿಮಾನ ಮೇಲೆಕ್ಕೆ ಹಾರಲು ಸಾಧ್ಯವಾಗಿಲ್ಲ ಎಂದು ತನಿಖಾ ವರದಿಯಲ್ಲಿ ಎಎಐಬಿ ತಿಳಿಸಿದೆ

ವಿಮಾನ ದುರಂತಕ್ಕೀಡಾಗುವ ಮೊದಲು ಪೈಲಟ್​​ಗಳಿಬ್ಬರು ಮಾತನಾಡಿಕೊಂಡಿದ್ದು, ಬ್ಲ್ಯಾಕ್​​​ಬಾಕ್ಸ್​​ನಲ್ಲಿ ದಾಖಲಾಗಿದೆ. ಒಬ್ಬ ಪೈಲಟ್​ ‘ಇಂಧನವನ್ನು ಏಕೆ ಆಫ್​ ಮಾಡಿದ್ದೀರಿ ಎಂದು ಕೇಳುತ್ತಾರೆ. ಅದಕ್ಕೆ ಇನ್ನೊಬ್ಬ ಪೈಲಟ್​ ‘ನಾನು ಮಾಡಿಲ್ಲ’ ಎಂದು ಹೇಳುತ್ತಾರೆ. ಇಂಧನ ಸ್ವಿಚ್​​ಗಳನ್ನು ಮರುಚಾಲನೆ ಮಾಡಿದರೂ, ಅವು ಸಕ್ರಿಯವಾಗಿಲ್ಲ ಎಂದು ತನಿಖಾ ವರದಿ ತಿಳಿಸಿದೆ

ವಿಮಾನ ಟೇಕ್ ಆಫ್ ಆದ 30 ಸೆಕೆಂಡುಗಳ ನಂತರ ಭೀಕರವಾಗಿ ದುರಂತಕ್ಕೀಡಾಗಿದ್ದು ವಿಮಾನ ನಿಲ್ದಾಣದ ಪಕ್ಕದ ಹಾಸ್ಟೆಲ್​ ಮೇಲೆ ಅಪ್ಪಳಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ

 

Related Articles

error: Content is protected !!