160
ನವದೆಹಲಿ : ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡನ್ ಏರ್ಪೋರ್ಟ್ ನಿಂದ ಪಶ್ಚಿಮ ಬಂಗಾಳದ ಕೋಲ್ಕತಾಗೆ ತೆರಳಲಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದೆ. ಹಾಗಾಗಿ ಗುಜರಾತ್ ವಿಮಾನ ದುರಂತದ ಬೆನ್ನಲ್ಲೆ ಮತ್ತೊಂದು ಅನಾಹುತ ತಪ್ಪಿದೆ.
ವಿಮಾನ ಇನ್ನೇನು ಟೇಕಾಫ್ ಆಗಬೇಕಿತ್ತು ಆದರೆ ಅಂತಿಮ ಕ್ಷಣದಲ್ಲಿ ವಿಮಾನದ ಸಿಬ್ಬಂದಿ ತಾಂತ್ರಿಕ ದೋಷ ಪತ್ತೆ ಮಾಡಿದ್ದಾರೆ. ಹಾಗಾಗಿ ಸುಮಾರು 1 ಗಂಟೆ ಕಾಲ ಪ್ರಯಾಣ ವಿಳಂಬವಾಯಿತು.

