113
ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರ ನರಮೇಧ ನಡೆದ ಹೊತ್ತಿನಲ್ಲೇ ನವದೆಹಲಿಯಲ್ಲಿನ ಪಾಕಿಸ್ತಾನ ದೂತಾವಾಸದಲ್ಲಿ ಕೇಕ್ ಕತ್ತರಿ ಸಲಾಗಿದೆ. ವ್ಯಕ್ತಿಯೊಬ್ಬ ಕೇಕ್ ಬಾಕ್ಸ್ ಹಿಡಿದುಕಚೇರಿಯೊಳಗೆ ತೆರಳುತ್ತಿದ್ದ ದೃಶ್ಯಗಳು ವಿಡಿ ಯೋದಲ್ಲಿ ಸೆರೆಯಾಗಿದೆ. ಮಾಧ್ಯಮಗಳು ಆತನ್ನು ನೀವು ರಾಯಭಾರ ಕಚೇರಿಯ ಸಿಬ್ಬಂದಿಯೇ ಎಂದು ಪ್ರಶ್ನಿಸಿದಾಗ ಆತ ಯಾವುದೇ ಉತ್ತರ ನೀಡಿದೇ ತಪ್ಪಿಸಿಕೊಂಡಿದ್ದಾನೆ. ಭಾರತದಲ್ಲಿನ ದುರಂತದ ಹೊತ್ತಿನಲ್ಲೂ ಪಾಕ್ ಅಧಿಕಾರಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿದೆ. ಇದು ಪ್ರವಾಸಿಗರ ಹತ್ಯೆಯನ್ನು ಸಂಭ್ರಮಿಸಲು ಮಾಡಿದ್ದು ಎಂದು ಟೀಕಿಸಲಾಗುತ್ತಿದೆ.

