148
ನವದೆಹಲಿ : ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾ ಧೀಶ ನ್ಯಾ. ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಪೋಟಕ ಅಂಶಗಳಿವೆ. ‘ಜಡ್ಜ್ ವರ್ಮಾ ಮನೆಯಲ್ಲಿ ಸುಟ್ಟ 500 ರು. ನೋಟಿನ 4-5 ಗೋಣಿ ಚೀಲಗಳು ಪತ್ತೆ ಆಗಿವೆ’ ಎಂದು ವರದಿಯಲ್ಲಿ ಉಲ್ಲೇಖಿಸ ಲಾಗಿದೆ. ನ್ಯಾ| ಉಪಾಧ್ಯಾಯ ವರದಿಯಲ್ಲಿ ವಿಡಿಯೋ ಲಗತ್ತಿಸಲಾಗಿದ್ದು ಸುಟ್ಟಿರುವ ರಾಶಿರಾಶಿ ಹಣ ತುಂಬಿದ ಚೀಲಗಳ ದೃಶ್ಯಗಳಿವೆ ಎಂದು ತಿಳಿದು ಬಂದಿದೆ

