110
ಬಿಕಾನೇರ್ : ಸಿಂಧೂ ಜಲ ಒಪ್ಪಂದ ಅಮಾನತು ಪುನರುಚ್ಚರಿಸಿರುವ ಪ್ರಧಾನಿ ಮೋದಿ, ನಮಗೆ ನದಿಗಳ ಮೇಲೆ ಸಂಪೂರ್ಣ ಹಕ್ಕು ಇದ್ದು, ಪಾಕಿಸ್ತಾನ ನೀರು ಪಡೆಯಲು ಬಿಡುವುದಿಲ್ಲ ಎಂದಿದ್ದಾರೆ. ಸಿಂಧೂ ಜಲ ಒಪ್ಪಂದ ಅಮಾನತು ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ ಅವರು, ಪ್ರತಿಯೊಂದು ಭಯೋತ್ಪಾದಕ ದಾಳಿಗೂ ಪಾಕಿಸ್ತಾನ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಪಾಕಿಸ್ತಾನದ ಜತೆಗಿನ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು.

