96
ಹೊಸದಿಲ್ಲಿ : ಜುಲೈ 21ರಿಂದ ಆಗಸ್ಟ್ 21ರವರೆಗೆ ಸಂಸತ್ನ ಮುಂಗಾರು ಅಧಿವೇಶನವನ್ನು ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ದೃಷ್ಟಿಯಿಂದ ಆಗಸ್ಟ್ 13 ಮತ್ತು 14ರಂದು ಯಾವುದೇ ಸಭೆಗಳು ನಡೆಯುವುದಿಲ್ಲ ಎಂದು ಅವರು ಹೇಳಿದರು. ಈ ಹಿಂದೆ ಜುಲೈ 21ರಿಂದ ಆಗಸ್ಟ್ 12ರ ನಡುವೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಘೋಷಿಸಲಾಗಿತ್ತು.

