186
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತನ್ನು ಆಗಸ್ಟ್ 2ರಂದು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಇದರ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ವಹಿಸಲಿದ್ದಾರೆ. ಇದರ ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರನ್ನು ತಲುಪುವಂತೆ ನೋಡಿಕೊಳ್ಳಲಾಗುವುದು ಕೇಂದ್ರ ತಿಳಿಸಿದೆ

