Home » ಪುರಿ ಜಗನ್ನಾಥ ರಥಯಾತ್ರೆ : 750 ಜನ ಅಸ್ವಸ್ಥ
 

ಪುರಿ ಜಗನ್ನಾಥ ರಥಯಾತ್ರೆ : 750 ಜನ ಅಸ್ವಸ್ಥ

by Kundapur Xpress
Spread the love

ಪುರಿ : ಒಡಿಶಾದ ವಿಶ್ವಪ್ರಸಿದ್ದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಶುಕ್ರವಾರ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 750ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ಕಾಲ್ತುಳಿತದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ರಥಯಾತ್ರೆ ಸ್ಥಗಿತಗೊಳಿಸಿ, ಶನಿವಾರ ಬೆಳಗ್ಗೆ ಮತ್ತೆ ಪುನಾರಂಭಿಸಲಾಗಿದೆ. ರಥಯಾತ್ರೆ ಮಧ್ಯದಲ್ಲೇ ನಿಂತಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿ ಎನ್ನಲಾಗಿದೆ.

ಆಗಿದ್ದೇನು ?

ಶುಕ್ರವಾರ ಜಗನ್ನಾಥ ದೇವರು, ಅವರ ಅಣ್ಣ ಬಲಭದ್ರ ಹಾಗೂ ತಂಗಿ ಸುಭದ್ರಾ ದೇವಿಯ ರಥಯಾತ್ರೆ ನಡೆಯುತ್ತಿತ್ತು. ಸುಮಾರು 10 ಲಕ್ಷಕ್ಕೂಅಧಿಕ ಭಕ್ತರು ಸೇರಿದ್ದರು. ಸಂಜೆಯ ವೇಳೆಗೆ ಮೂರೂ ರಥಗಳು ದೇವತೆಗಳ ಚಿಕ್ಕಮ್ಮನ ಸ್ಥಳವೆಂದು ಪರಿಗಣಿಸಲಾದ ಗುಂಡಿಚಾ ದೇವಸ್ಥಾನವನ್ನು ತಲುಪಬೇಕಿತ್ತು. ಈ ಪೈಕಿ ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ತಿರುವಿನಲ್ಲಿ ಸಿಲುಕಿಕೊಂಡು ನಿಂತುಬಿಟ್ಟಿತು. ಇದರಿಂದಾಗಿ ಉಳಿದ ಎರಡು ರಥಗಳು ಕೂಡಾ ಮುಂದೆ ಸಾಗಲಿಲ್ಲ.ಈ ವೇಳೆ ಭಕ್ತರ ನಡುವೆ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ 450ಕ್ಕೂ ಹೆಚ್ಚು ಜನರು ಕಾಲ್ತುಳಿತದಿಂದ, ಉಳಿದವರು ಘಟನಾ ಸ್ಥಳದಲ್ಲಿನ ಭಾರೀ ಉಷ್ಣ ಹವೆಯಿಂದ ತಲೆಸುತ್ತು ಬಂದು ಕೆಳಗೆ ಬಿದ್ದು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Related Articles

error: Content is protected !!