94
ಹೊಸದಿಲ್ಲಿ : ಪಾಕಿಸ್ತಾನ ಭಾರತಕ್ಕೆ ಬೇಕಾಗಿರುವ ಭಯೋತ್ಪಾದಕರನ್ನು ಹಸ್ತಾಂತರಿಸಿ ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತಕ್ಕೆ ಬಿಟ್ಟು ಕೊಟ್ಟ ನಂತರವೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯಲಿದೆ. ಎಂದು ಭಾರತ ತಿಳಿಸಿದೆ.
ಈ ಮೂಲಕ ಪಾಕಿಸ್ತಾನದೊಂದಿಗೆ ಭವಿಷ್ಯದ ಯಾವುದೇ ಮಾತುಕತೆಗೆ ಭಾರತ ದೃಢವಾದ ಷರತ್ತುಗಳನ್ನು ವಿಧಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇತ್ತೀಚೆಗೆ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆಗೆ ಸಿದ್ದ ಎಂದು ಹೇಳಿದ ಬೆನ್ನಲ್ಲೇ ಈ ಪ್ರತಿಕ್ರಿಯೆ ಬಂದಿದೆ.
ವಿಶೇಷವಾಗಿ 26 ನಾಗರಿಕರನ್ನು ಕೊಂದ ಪಹಲ್ದಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪ್ರಾರಂಭಿಸಿದ ಆಪರೇಷನ್ ಸಿಂದೂರ್ ನಂತರ, ಎರಡೂ ನೆರೆಹೊರೆಯವರ ನಡುವಿನ ಸಂಬಂಧಗಳು ಉದ್ವಿಗ್ನವಾಗಿವೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್, ಪಾಕಿಸ್ತಾನದ ಬಗ್ಗೆ ಭಾರತದ ನಿಲುವು ಯಾವಾಗಲೂ ಸ್ಪಷ್ಟ ಮತ್ತು ಸ್ಥಿರವಾಗಿದೆ ಎಂದು ಹೇಳಿದರು.

