131
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ಯುಗಾದಿ ದಿನವಾದ ಭಾನುವಾರ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಯೋಜನೆ ಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಂಸ್ಥಾಪಕ ಡಾ.ಕೆ.ಬಿ. ಹೆಡಗೇವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಲಿದ್ದು, ಬಳಿಕ ಮಾಧವ್ ನೇತ್ರಾಲಯ ಪ್ರೀಮಿಯಂ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದೇ ಮೊದಲ ಬಾರಿಗೆ ಹಾಲಿ ಪ್ರಧಾನಿಯೊಬ್ಬರು ಡಾ.ಹೆಡಗೇವಾರ್ ಸ್ಮೃತಿ ಮಂದಿರದ ಆವರಣಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬುದೇ ವಿಶೇಷ ಅಟಲ್ ಬಿಹಾರಿ ವಾಜಪೇಯಿ ಅವರು 2007ರಲ್ಲಿ ಸ್ಮಾರಕಕ್ಕೆ ಭೇಟಿ ನೀಡಿದ್ದರು, ಆದರೆ ಆ ಸಮಯದಲ್ಲಿ ಅವರು ಪ್ರಧಾನಿಯಾಗಿರಲಿಲ್ಲ.

