74
ಹೊಸದಿಲ್ಲಿ : 1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ರಾಷ್ಟ್ರಪತಿ ಬ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾನುವಾರ ಗೌರವ ಸಲ್ಲಿಸಿದ್ದಾರೆ. 1919 ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರ ಪತಿ ಮುರ್ಮು ಗೌರವ ಸಲ್ಲಿಸಿ, ಕೃತಜ್ಞ ಭಾರತವು ಯಾವಾಗಲೂ ಅವರಿಗೆ ಋಣಿಯಾಗಿದೆ ಎಂದು ಹೇಳಿದ್ದಾರೆ
ಜಲಿಯನ್ ವಾಲಾಬಾಗ್ ನಲ್ಲಿ ಭಾರತ ಮಾತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ಗೌರವಪೂರ್ವಕ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗಗಳು ನಮ್ಮ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸಿದವು ಕೃತಜ್ಞ ಭಾರತವು ಯಾವಾಗಲೂ ಅವರಿಗೆ ಋಣಿಯಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದೇ ರೀತಿ ನಾವು ಜಲಿಯನ್ ವಾಲಾ ಬಾಗ್ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.

