Home » ಚರ್ಚಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಟಿಟಿಡಿ ಅಧಿಕಾರಿ ಅಮಾನತು
 

ಚರ್ಚಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಟಿಟಿಡಿ ಅಧಿಕಾರಿ ಅಮಾನತು

by Kundapur Xpress
Spread the love

ತಿರುಮಲ : ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್‌ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ತಿರುಪತಿ ತಿರುಮಲ ದೇವಸ್ವಂ (ಟಿಟಿಡಿ) ಕೆಲಸದಿಂದ ಅಮಾನತು ಮಾಡಿದೆ.

ಹಿಂದೂ ಧರ್ಮದ ಹೊರತಾಗಿ ಬೇರೆ ಧರ್ಮವನ್ನು ಪಾಲಿಸುವವರು ಟಿಟಿಡಿಯಲ್ಲಿ ಕೆಲಸ ಮಾಡುವಂತಿಲ್ಲ ಎಂಬ ಕಠಿಣ ನಿಯಮವಿದೆ. ಆದರೆ, ಪ್ರತಿ ಭಾನುವಾರ ಚರ್ಚ್‌ಗೆ ಹೋಗಿ ಕ್ರೈಸ್ತರ ಆಚರಣೆಗಳಲ್ಲಿ ಭಾಗಿಯಾಗುವ ಮೂಲಕ ರಾಜಶೇಖರ್ ಬಾಬು ಈ ನಿಯಮವನ್ನು ಉಲ್ಲಂಘಿಸಿದ್ದರು. ಎನ್ನಲಾಗಿದೆ. ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿದ್ದ ಟಿಟಿಡಿಯ ಕಣ್ಣಾವಲು ವಿಭಾಗ ಈ ಎಲ್ಲಾ ಬೆಳವಣಿಗೆಯ ವರದಿ ಸಲ್ಲಿಸಿತ್ತು. ಅದರ ಬೆನ್ನಲ್ಲೇ ರಾಜಶೇಖರ್ ಅವರನ್ನು ಅಮಾನತು ಆಗಿದೆ. ಇತ್ತೀಚಿನ ಕೆಲ ತಿಂಗಳಲ್ಲಿ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.

 

Related Articles

error: Content is protected !!