122
ಕೋಟ : ಕಾಪು ಮಾರಿಗುಡಿ ದೇವಸ್ಥಾನಕ್ಕೆ ಪ್ರತಿಷ್ಠಾ ಬ್ರಹ್ಮ ಕಲಶ ಸಂಬಂಧ ಕುಂದಾಪುರ ಹಾಗೂ ಬೈಂದೂರು ವಲಯಗಳ ಹೊರೆ ಕಾಣಿಕೆ ವಾಹನಗಳಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಸನ್ನಿಧಾನದಲ್ಲಿ ಭಕ್ತರ ಪರವಾಗಿ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಲ್ಲೂರು ದೇಗುಲದ ಮಾಜಿ ಅಧ್ಯಕ್ಷ ಕೃಷ್ಣ ಪ್ರಸಾದ ಅಡ್ಯಂತಾಯ, ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಹಾಗೂ ಉಪಾಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ .ಎಸ್., ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ಕಾಮತ್, ನವೀನ್ ಶೆಟ್ಟಿ ಹಾಗೂ ಇತರರು ಹಾಜರಿದ್ದರು

