160
ಉಡುಪಿ : ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಕಾಂಚೀ ಶ್ರೀಗಳನ್ನು ಪುತ್ತಿಗೆ ಶ್ರೀಪಾದರ ಅಪೇಕ್ಷೆ ಮೇರೆಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಿತ ಅಧಿಕಾರಿಗಳು ಭೇಟಿ ಮಾಡಿ ಆಮಂತ್ರಣ ನೀಡಿದರು.
ಪುತ್ತಿಗೆ ಶ್ರೀಪಾದರ ಆಹ್ವಾನವನ್ನು ಮನ್ನಿಸಿದ ಕಾಂಚೀ ಶ್ರೀಗಳು ನ.20ರಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲು ಸಮ್ಮತಿಸಿದರು.

