22
ಆನೆಗುಡ್ಡೆ : ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆಯವರು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀ ರಮಣ ಉಪಾಧ್ಯಾಯರು ಅವರನ್ನು ಬರಮಾಡಿಕೊಂಡು ಗೌರವ ಪ್ರಸಾದವನ್ನು ನೀಡಿದರು. ಪರ್ಯಾಯ ಅರ್ಚಕರಾದ ಕೆ.ವ್ಯಾಸ ಉಪಾಧ್ಯಾಯ ಮತ್ತು ಸಹೋದರರು ಹಾಗೂ ದೇವಸ್ಥಾನದ ಪ್ರಬಂಧಕರಾದ ನಟೇಶ್ ಕಾರಂತ್ ಉಪಸ್ಥಿತರಿದ್ದರು.

