Home » ಬಿಜೆಪಿಯಿಂದ ನಾಳೆ ಅಹೋರಾತ್ರಿ ಧರಣಿ
 

ಬಿಜೆಪಿಯಿಂದ ನಾಳೆ ಅಹೋರಾತ್ರಿ ಧರಣಿ

by Kundapur Xpress
Spread the love

ಬೆಂಗಳೂರು : ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ಹಾಗೂ ತನ್ನ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಬುಧವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟ ಆರಂಭಿಸಲಿದೆ.

ಇದರ ಅಂಗವಾಗಿ ಏ.2ರಂದು ಬುಧವಾರ ಬೆಂಗಳೂರಿನ ಫ್ರೀಡಂಪಾರ್ಕಲ್ಲಿ ಬೆಳಗ್ಗೆ 11.00 ಗಂಟೆಯಿಂದ ಅಹೋರಾತ್ರಿ ಧರಣಿ ಆರಂಭಿಸಲಿದೆ. ಏ.7 ರಿಂದ ರಾಜ್ಯಾದ್ಯಂತ ಜನಜಾಗೃತಿ. ಸಲುವಾಗಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲೂ ಬಿಜೆಪಿ ತೀರ್ಮಾನಿಸಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ತಿಳಿಸಿದರು.

 

Related Articles

error: Content is protected !!