156
ಬೆಂಗಳೂರು : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ ರದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ರಾಜ್ಯಾದ್ಯಂತ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ. ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದ್ದಾರೆ.

