57
ಬೆಂಗಳೂರು : ದೇಶದ ವಿಚಾರದಲ್ಲೂ ಕಾಂಗ್ರೆಸ್ಸಿಗರು ಪಾಕಿಸ್ತಾನಕ್ಕೆ ಸಹಾಯವಾಗುವಂತೆ ಮಾತನಾಡುತ್ತಿರುವುದು ಯಾಕೆ ಎಂಬುದು ಯಕ್ಷಪ್ರಶ್ನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಅವರು ಬುಧವಾರ ಸುದ್ದಿಗಾರರ ಜತೆ ಮಾತನಾಡಿ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಇದ್ದು, ನಾವು ಎಂದಿಗೂ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿಲ್ಲ ಮತ್ತು ಅವರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಮಾಡಿಲ್ಲ, ಹಿಂದೆ ಸರ್ಜಿಕಲ್ ಸ್ಟೈಕ್ ನಡೆದಾಗ ಕಾಂಗ್ರೆಸ್ಸಿಗರು ಸಾಕ್ಷಿ ಕೇಳಿದ್ದರು. ಅಲ್ಲದೆ, ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿದ್ದರು. ಆಗ ಸೈನಿಕರ ಬಗ್ಗೆ ನಂಬಿಕೆ ಎಲ್ಲಿ ಹೋಗಿತ್ತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

