Home » ಸರಕಾರಕ್ಕೆ ಬಿಸಿ ತುಪ್ಪವಾದ ಜಾತಿಗಣತಿ ವರದಿ
 

ಸರಕಾರಕ್ಕೆ ಬಿಸಿ ತುಪ್ಪವಾದ ಜಾತಿಗಣತಿ ವರದಿ

by Kundapur Xpress
Spread the love

ಬೆಂಗಳೂರು : ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು ಜಾತಿ ಗಣತಿ ವರದಿಯನ್ನು ಮಂಡಿಸಿದೆ. ಇದಕ್ಕೆ ಹಲವು ಸಮುದಾಯಗಳಿಂದ ಸಹಮತ ವ್ಯಕ್ತವಾಗಿದ್ದರೆ, ಇನ್ನೂ ಹಲವು ಪ್ರಬಲ ಸಮುದಾಯಗಳು ತೀವ್ರವಾಗಿ ವಿರೋಧಿಸುತ್ತಿವೆ. ಬಿಜೆಪಿ ನಾಯಕರು ಕೂಡ ಈ ವರದಿ ಬಗ್ಗೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಪಾಲಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ವರದಿ ವಿಚಾರ ವಿವಾದವಾಗುತ್ತಲೇ ಎಚ್ಚೆತ್ತು ಕೊಂಡಿರುವ ಸರ್ಕಾರ ಜಾತಿಗಣತಿ ವರದಿ ಕುರಿತು ಎಚ್ಚರಿಕೆ ಹೆಜ್ಜೆಯಿಡುತ್ತಿದೆ. 

ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸರ್ಕಾರ ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಚಿವ ಸಂಪುಟವು ಈ ವರದಿಯನ್ನು ಪರಿಶೀಲಿಸಿ, ಚರ್ಚಿಸಲಿದೆ. ಅಲ್ಲಿರುವ ಸತ್ಯಾಂಶಗಳ ಆಧಾರದ ಮೇಲೆ ಎಲ್ಲರಿಗೂ ನ್ಯಾಯ ಸಿಗಲಿದೆ. ಆದರೆ ಈ ಜಾತಿ ಗಣತಿ ವರದಿ ವಿರುದ್ಧ ನೀಡುತ್ತಿರುವ ಹೇಳಿಕೆಗಳು ರಾಜಕೀಯ ಪ್ರೇರಿತ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಬಗ್ಗೆ ಮಾತನಾಡಿದ್ದಾರೆ. ನಾನು ಬೇರೆ ಜಿಲ್ಲೆಗಳ ಪ್ರವಾಸದಲ್ಲಿದ್ದ ಕಾರಣ ಇನ್ನೂ ಈ ವರದಿ ಏನು ಎಂದು ನೋಡಿಲ್ಲ. ಅಲ್ಲದೆ ಈ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ. ಚರ್ಚಿಸಬೇಕಾಗಿದ್ದು, ವಿಧಾನಸಭೆಯಲ್ಲೂ ಈ ಕುರಿತು ಚರ್ಚಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹಾಗಾಗಿ ಯಾರೂ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವ ಮಾತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಾತಿ ಗಣತಿ ವರದಿ ಬಗ್ಗೆ ಕೆಲವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿರಬಹುದು. ಆದರೆ, ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ ಎಂದರು.

 

Related Articles

error: Content is protected !!