Home » ನಾಳೆಯಿಂದ ಸಿಎಂ ದೆಹಲಿ ಪ್ರವಾಸ
 

ನಾಳೆಯಿಂದ ಸಿಎಂ ದೆಹಲಿ ಪ್ರವಾಸ

by Kundapur Xpress
Spread the love

ಬೆಂಗಳೂರು : ಮೊಣಕಾಲಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ ನಾಲ್ಕು ದಿನಗಳ ಕಾಲ ಹೊಸದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ತಮ್ಮ ಸಂಪುಟದ ಸಹೋದ್ಯೋಗಿಗಳ ಹಿತ ಕಾಪಾಡುವುದರ ಜೊತೆಗೆ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಿಕೊಳ್ಳಲು ಅವರು ಹೈಕಮಾಂಡ್ ಭೇಟಿ ಮಾಡಲಿದ್ದಾರೆ

ಕಳೆದ ವಾರವಷ್ಟೆ ಸಿಎಂ ಆಪ್ತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸದಿಲ್ಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಸೇರಿದಂತೆ ಕೆಲವು ಪ್ರಸ್ತಾಪಗಳನ್ನು ಸಿದ್ದರಾಮಯ್ಯನವರು ಭೇಟಿ ಮಾಡಿದ ಸಂದರ್ಭದಲ್ಲಿ ಮುಂದಿಡಲು ವೇದಿಕೆ ಸಿದ್ಧಪಡಿಸಿದ್ದರು ಎಂದು ಮೂಲಗಳು ತಿಳಿಸಿದ್ದವು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸ್ಥಾನಕ್ಕೆ ತಮ್ಮ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಸತೀಶ್ ಜಾರಕಿಹೊಳಿ ಆಶಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ

 

Related Articles

error: Content is protected !!