103
ಬೆಂಗಳೂರು : ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆ ಜೂ.1ರಿಂದ 25ರವರೆಗೆ ದುಬೈ ಹಾಗೂ ಯೂರೋಪ್ಗೆ ತೆರಳಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ಗೆ ನಗರದ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ.
ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಧೀಶರಾದ ಐ.ಪಿ. ನಾಯ್ಕ ಅವರು ಈ ಆದೇಶ ಮಾಡಿದ್ದಾರೆ.
ಡಿವಿಲ್ ಚಿತ್ರ ನಿರ್ಮಿಸುತ್ತಿರುವ ಜೈಮಾತಾ ಕಂಬೈನ್ಸ್ನ ಕಾರ್ಯಕಾರಿ ನಿರ್ಮಾಪಕರು ಚಿತ್ರೀಕರಣಕ್ಕಾಗಿ 2025ರ ಜೂ.1ರಿಂದ 25ರವರೆವರೆಗೆ ದರ್ಶನ್ ಅವರ ಉಪಸ್ಥಿತಿಯ ಅಗತ್ಯವಿದೆ ಎಂದು ತಿಳಿಸಿ ಪತ್ರ ನೀಡಿದ್ದಾರೆ. ಚಿತ್ರೀಕರಣ ಪೂರ್ಣಗೊಂಡ ನಂತರ ದರ್ಶನ್ ಭಾರತಕ್ಕೆ ಮರಳುವುದಾಗಿ ಭರವಸೆ ನೀಡಿದ್ದಾರೆ.

