Home » ಎನ್‌ ಐ ಎ ದಾಳಿ : ಮೂವರು ವಶಕ್ಕೆ
 

ಎನ್‌ ಐ ಎ ದಾಳಿ : ಮೂವರು ವಶಕ್ಕೆ

by Kundapur Xpress
Spread the love

ಬೆಂಗಳೂರು : ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬೆಂಗಳೂರು ಮತ್ತು ಕೋಲಾರದ ಐದು ಸ್ಥಳಗಳಲ್ಲಿ ಶೋಧ ನಡೆಸಿದ ಎನ್‌ಐಎ ಅಧಿಕಾರಿಗಳು, ಮನೋವೈದ್ಯ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಜೈಲಿನಲ್ಲಿನ ಕೈದಿಗಳಿಗೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಗೆ ಸೇರುವಂತೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಮಂಗಳವಾರ ಎನ್‌ಐಎ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ‘ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್‌ಸ್ಪೆಕ್ಟರ್ ಚಾನ್ಸ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾಳನ್ನು ಬಂಧಿಸಿದ್ದಾರೆ.

ಎನ್‌ಐಎ ಅಧಿಕಾರಿಗಳ ಕಾರ್ಯಾಚರಣೆ ವೇಳೆ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ

 

Related Articles

error: Content is protected !!