ಮೈಸೂರು: ರಾಷ್ಟ್ರಪತಿ ದೌಪದಿ ಮುರ್ಮು ಅವರು ಕನ್ನಡ ಕಲಿಯಲು ಪ್ರಯತ್ನಿಸುವುದಾಗಿ ಹೇಳಿ, ದೇಶದ ಪ್ರತಿಯೊಂದು ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ತಮಗೆ ಆಳವಾದ ಗೌರವವಿದೆ ಎಂದಿದ್ದಾರೆ.
ಸೋಮವಾರ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ವಜ್ರಮಹೋತ್ಸವ ಆಚರಣೆಯಲ್ಲಿ ಮಾತನಾಡಿದ ರಾಷ್ಟ್ರಪತಿ ಮುರ್ಮು,”ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ನಾನು ಹೇಳಲು ಬಯಸುತ್ತೇನೆ, ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನ್ನ ದೇಶದ ಎಲ್ಲಾ ಭಾಷೆಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ. ಅವುಗಳಲ್ಲಿ ಪ್ರತಿಯೊಂದರ ಬಗ್ಗೆಯೂ ನನಗೆ ಅಪಾರ ಗೌರವ ಮತ್ತು ಗೌರವವಿದೆ” ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡದಲ್ಲಿ ಭಾಷಣ ಮಾಡಿ ವೇದಿಕೆಯಲ್ಲಿ ಕುಳಿತಿದ್ದ ರಾಷ್ಟ್ರಪತಿಯವರಿಗೆ ಕನ್ನಡ ಬರುತ್ತದೆಯೇ ಎಂದು ಕೇಳಿದು ವಿಶೇಷವಾಗಿತ್ತು.
ಪ್ರತಿಯೊಬ್ಬರೂ ತಮ್ಮ ಭಾಷೆಗಳನ್ನು ಜೀವಂತವಾಗಿಡಲು ಮತ್ತು ಅವರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಶ್ರಮಿಸಬೇಕೆಂದು ರಾಷ್ಟ್ರಪತಿ ಒತ್ತಾಯಿಸಿ, ನಾನು ಖಂಡಿತವಾಗಿಯೂ ಕನ್ನಡವನ್ನು ಕ್ರಮೇಣ ಕಲಿಯಲು ಪ್ರಯತ್ನಿಸುತ್ತೇನೆ” ಎಂದು ನಗುತ್ತಾ ಹೇಳಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

