Home » ಚಾಮುಂಡೇಶ್ವರಿ ವಕ್ಫ್ ಆಸ್ತಿಯೇ ?
 

ಚಾಮುಂಡೇಶ್ವರಿ ವಕ್ಫ್ ಆಸ್ತಿಯೇ ?

ಡಿ.ಕೆ ಶಿವಕುಮಾರ್ ಗೆ ಕರಂದ್ಲಾಜೆ ಪ್ರಶ್ನೆ

by Kundapur Xpress
Spread the love

ಬೆಂಗಳೂರು : ಡಿ.ಕೆ ಶಿವಕುಮಾರ್ ಅವರೇ ನೀವು ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ 3500 ಹೆಚ್ಚು ದೇವಸ್ಥಾನಗಳು ಹಿಂದೂಗಳ ಆಸ್ತಿ. ಸರ್ಕಾರದ ಆಸ್ತಿ ಎಂದರೆ ಮುಜುರಾಯಿ ಆಸ್ತಿ, ಮುಜುರಾಯಿ ಆಸ್ತಿಯಾದರೆ ಅದು ಹಿಂದೂಗಳ ಆಸ್ತಿ ಅಲ್ವ. ಸರ್ಕಾರದ ಆಸ್ತಿ ಹಿಂದೂಗಳದ್ದೂ ಅಲ್ಲ ಅಂದ್ರೆ ಏನು ಹೇಳಲು ಹೊರಟಿದ್ದೀರಿ ಡಿಕೆ ಶಿವಕುಮಾರ್ ಅವರಿಗೆ ಏನಾಗಿದೆ  ಎಂದು ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.

ಡಿಕೆಶಿ ಅವರೇ ನೀವು ಮುಖ್ಯಮಂತ್ರಿಯಾಗುವ ಭರದಲ್ಲಿ ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದೀರಿ. ಹಿಂದೂಗಳ ವಿಚಾರದಲ್ಲಿ ಸಂಶಯ ಹುಟ್ಟು ಹಾಕುತ್ತಿದ್ದೀರಿ. ಸರ್ಕಾರವನ್ನು ನೀವು ಬಿಟ್ಟು ಹೋಗಿ. ಹಿಂದೂ ಮಾನಸಿಕತೆ ಇರುವವರು ಬಂದು ಆಡಳಿತ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ

 

Related Articles

error: Content is protected !!