ಬೈಂದೂರು : ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಸೋಮವಾರ ಕಿರಿಮಂಜೇಶ್ವರದಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಶೇ.33ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆಯನ್ನು ನೀಡಿದವರು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಎಂದ ಅವರು, ರಾಜ್ಯದಲ್ಲಿ ಜಿ.ಪಂ-ತಾಪಂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡುವ ಮೂಲಕ ಯಡಿಯೂರಪ್ಪನವರು ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಹಿಳಾ ಸಮುದಾಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದರು ಎಂದರು
ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಇರಬೇಕೆ ಎಂಬುದನ್ನು ನಮ್ಮ ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈ ಅಕ್ಕಿಯೂ ಸಹ ಪ್ರಧಾನಿ ನರೇಂದ್ರ ಮೋದಿಯವರು ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು
ಬೈಂದೂರಿನ ಸಮಗ್ರ ಅಭಿವೃದ್ಧಿಯಾಗಬೇಕಾದರೆಹಾಗೂ ಬೈಂದೂರು ಕ್ಷೇತ್ರ ಒಂದು ಮಾದರಿ ಕ್ಷೇತ್ರವಾಗಬೇಕಾದರೆ ರಾಘಣ್ಣ ಮತ್ತೊಮ್ಮೆ ಸಂಸದರಾಗಲೇಬೇಕು. ಕ್ಷೇತ್ರ ಜನತೆಗೆ ವಾರಾಹಿಯಿಂದ ಸಿಹಿ ನೀರನ್ನು ಕುಡಿಸುವ ಯೋಜನೆ ಜಾರಿಗಾಗಿ ರಾಘಣ್ಣ ಇನ್ನೊಮ್ಮೆ ಸಂಸತ್ತಿಗೆ ಆಯ್ಕೆಯಾಗಲೇಬೇಕಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು
ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಶಿವಮೊಗ್ಗ ಬಿಜೆಪಿ ಉಪಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು, ಬಿ.ಎಸ್. ಯಡಿಯೂರಪ್ಪ ಪುತ್ರಿ ಅರುಣಾದೇವಿ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ಕುಮಾರ್ ಶೆಟ್ಟಿ ಚುನಾವಣಾ ಉಸ್ತುವಾರಿ ಅಶೋಕ ಮೂರ್ತಿ, ಉಮಾದೇವಿ,ಶಿಲ್ಪಾ ಸುವರ್ಣ, ಸಂಧ್ಯಾರಮೇಶ, ಶೋಭಾ ಪುತ್ರನ್, ಮಹಿಳಾ ಮೋಚಾದ ಶ್ಯಾಮಲ ಕುಂದರ್, ದೀಪಾ ಶೆಟ್ಟಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಮಹೇಂದ್ರ ಪೂಜಾರಿ, ಉಮೇಶ ಶೆಟ್ಟಿಕಲ್ಲದ್ದೆ, ಗಾಯತ್ರಿ, ಮಂಗಳಾ, ಗ್ರಾ.ಪಂ ಅಧ್ಯಕ್ಷ ಶೇಖರಖ ಾರ್ವಿ, ಸುರೇಶ ಬಟ್ವಾಡಿ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

